Sunday, August 15, 2021

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನಹಳ್ಳಿಯಲ್ಲಿ 75ನೇ ಸ್ವಾತಂತ್ರೋತ್ಸವದ ಸಂಭ್ರಮ

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನಹಳ್ಳಿಯಲ್ಲಿ 75ನೇ ಸ್ವಾತಂತ್ರೋತ್ಸವದ ಸಂಭ್ರಮ

ಶಹಾಪುರ ಪಟ್ಟಣದಿಂದ 5 ಕಿಲೋಮೀಟರ ದೂರದಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ನಡೆಯುತ್ತಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನಹಳ್ಳಿ ಕ್ರಾಸ್ ಇಲ್ಲಿ ಇಂದು 75 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುರಯ್ಯಬೇಗಂ ಹಾದಿಮನಿ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ  ಪ್ರತಿವರ್ಷವೂ ಸ್ವಾತಂತ್ರ್ಯ ದಿನಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಲಾಗುತ್ತಿತ್ತು. ಆದರೆ ಈ ಕರೋನಾ ಮಹಾಮಾರಿ ಇಂದಾಗಿ ಮಕ್ಕಳು ಶಾಲೆಗೆ ಬರಲು ಆಗುತ್ತಿಲ್ಲ. ಆದಷ್ಟು ಬೇಗ ಈ ಮಹಾಮಾರಿ ತೊಲಗಿ ಮಕ್ಕಳು ಶಾಲೆಯ ಅಂಗಳದಲ್ಲಿ ನಲಿದು ಆಡುವಂತಾಗಲಿ ಎಂದರು. ಇದೇ ಸಂದರ್ಭದಲ್ಲಿ ನಮ್ಮ ಶಾಲೆಯ ಸಂಗೀತ ಶಿಕ್ಷಕಿಯರಾದ ಶ್ರೀಮತಿ ಸೌಮ್ಯ ಕುಲಕರ್ಣಿಯವರಿಗೆ "ಹೈದ್ರಾಬಾದ್ - ಕರ್ನಾಟಕದ ಸಂಸ್ಥಾನಗಳಲ್ಲಿ ಸಂಗೀತ" ಎಂಬ ವಿಷಯದ ಮೇಲೆ ಪ್ರಬಂಧವನ್ನು ಮಂಡಿಸಿ, ಡಾಕ್ಟರೇಟ್ ಪದವಿಯನ್ನು ಪಡೆದಿದ್ದಕ್ಕಾಗಿ ಅವರಿಗೆ ನಮ್ಮ ವಸತಿ ಶಾಲೆಯವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

 ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳಾದ ಶ್ರೀ ಬಸವರಾಜ ಭೂತಿ, ಶ್ರೀ ಹನುಮಂತ ಬಿಂಗಿ,  ಶ್ರೀ ಶಾಂತಗೌಡ, ಶ್ರೀ ಈರಣ್ಣ, ಉಪನ್ಯಾಸಕರಾದ ಶ್ರೀ ನಿಂಗಪ್ಪ, ದೈಹಿಕ ಶಿಕ್ಷಕರಾದ ಶ್ರೀಕಾಂತ ರಾಥೋಡ, ಬಸನಗೌಡ ಬಿರಾದಾರ, ಡಾ. ಸೌಮ್ಯ ಕುಲಕರ್ಣಿ, ಶ್ರೀಮತಿ ಗೌರಮ್ಮ, ಶ್ರೀಮತಿ ಸ್ವಪ್ನಾ ತಳವಾರ, ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.










School Photos

 

ಬರದ ಬರೆ

  ಮೊನ್ನೆ ಶನಿವಾರ ಅರ್ಧ ದಿನದ ಶಾಲೆ ಮುಗಿಸಿ,  ಬಸ್ಸತ್ತಿ  ಊರ ಕಡೆಗೆ ಹೊರಟೆ. ನನ್ನೂರಿಗೆ ಹೋಗದೆಯು ತುಂಬಾ ದಿನಗಳಾಗಿತ್ತು. ಹೋಗುವ ದಾರಿ ಮಧ್ಯ ಮಧ್ಯದಲ್ಲಿ ಅಲ್ಲಲ್ಲಿ ಬ...